ದಾವಣಗೆರೆಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ತರಕಾರಿಗಳನ್ನು ಪರಿಚಯಿಸುವ ಸಲುವಾಗಿ ‘ತರಕಾರಿಗಳ ಪ್ರದರ್ಶನ’ವನ್ನು ಏರ್ಪಡಿಸಲಾಯಿತು. ಪೂರ್ವಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ವಿವಿಧ ತರಕಾರಿಗಳನ್ನು ತಂದು ಪ್ರದರ್ಶನದಲ್ಲಿ ಭಾಗವಹಿಸಿ ಅವುಗಳ ಉಪಯೋಗ, ಬೆಳೆಯುವ ವಿಧಾನಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಥಣಿಸಂದ್ರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಮಂಜುಳಾ, ಕಾರ್ಯದರ್ಶಿಗಳಾದ ಜಯಣ್ಣ ಮುಂತಾದವರು ಪ್ರದರ್ಶನವನ್ನು ವೀಕ್ಷಿಸಿದರು.